31 ರಂದು ನಗರದಲ್ಲಿ ಆರೋಗ್ಯ ಮೇಳ

ದಾವಣಗೆರೆ, ಆ. 28- ಶ್ರೀ ಧನ್ವಂತರಿ ಆಯುರ್ವೇದ ಔಷಧ ಪ್ರತಿನಿಧಿಗಳ ಸಂಘದ ವತಿಯಿಂದ ಇದೇ ದಿನಾಂಕ 31  ಮತ್ತು ಸೆ. 1 ರಂದು ಎರಡು ದಿನಗಳ ಕಾಲ  ನಗರದ ಹದಡಿ ರಸ್ತೆಯಲ್ಲಿನ ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ `ಆರೋಗ್ಯ ಮೇಳ-2024′ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಬಿ. ಮಧುಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇಂದಿನ ಒತ್ತಡದ ಜೀವನ ಶೈಲಿಗೆ ಆಯುರ್ವೇದವೇ ಮದ್ದು ಎಂಬ ಸದುದ್ದೇಶದಿಂದ ಈ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ. ಪ್ರತಿ ದಿನ ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಎಲ್ಲಾ ರೀತಿಯ ಕಾಯಿಲೆಗಳ ಬಗ್ಗೆ ತಪಾಸಣೆ ಮಾಡಲಾಗುವುದು ಎಂದು ತಿಳಿಸಿದರು.

ಆ. 31 ರಂದು ಬೆಳಿಗ್ಗೆ 9 ಕ್ಕೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಎಂ.ಹೆಚ್. ಅಣ್ಣಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಯುಷ್ ಅಧಿಕಾರಿ ಯು.ಬಿ. ಯೋಗೇಂದ್ರ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆಂದರು.

ಪತ್ರಿಕಾಗೋಷ್ಠಿಯಲ್ಲಿ ಎನ್. ರಾಜೇಶ್, ಜಿ. ಅಮರೇಶ್, ರಾಜೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. 

error: Content is protected !!