ದಾವಣಗೆರೆ, ಸೆ.16- ಇಲ್ಲಿನ ಅಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಒಂದೇ ಕಡೆ ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ ನಡೆದಿದೆ.
ಕೂಡಲೇ ಮಧ್ಯ ಪ್ರವೇಶಿಸಿರುವ ಪೊಲೀಸರು, ಎರಡೂ ಕೋಮಿನ ಧ್ವಜಗಳನ್ನು ತೆರೆವುಗೊಳಿಸಿದ್ದು, ಪರಿಸ್ಥಿತಿ ಶಾಂತವಾಗಿದೆ.
ಈ ಸಂಬಂಧ ಎರಡೂ ಕೋಮಿನ ಕಡೆಯಿಂದ ಒಟ್ಟು 8 ಜನರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಭದ್ರತಾ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.