ನಗರದಲ್ಲಿ ಇಂದು ವಚನ ಗಾಯನ ತರಬೇತಿ

ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿ (ಗದಗ), ಜಿಲ್ಲಾ ಮಹಿಳಾ ಘಟಕ, ದಾವಣಗೆರೆ ವತಿಯಿಂದ ಇಂದು ಉಭಯ ಗುರುಗಳ ಸ್ಮರಣೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ವಿದ್ಯಾರ್ಥಿಗಳಿಗೆ ವಚನ ಗಾಯನ ತರಬೇತಿ ನಡೆಯಲಿದೆ.

ಮಧ್ಯಾಹ್ನ 1 ಗಂಟೆಗೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಸೌಮ್ಯ ಸತೀಶ್ ವಹಿಸುವರು. ಮುಖ್ಯ ಅತಿಥಿಗಳಾಗಿ ಎಸ್‌ಬಿಸಿ ಕಾಲೇಜು ಪ್ರಾಂಶುಪಾಲ ಡಾ. ಕೆ. ಷಣ್ಮುಖ, ನಿವೃತ್ತ ಸಂಗೀತ ಶಿಕ್ಷಕರಾದ ಮಂಗಳಗೌರಿ ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಎಸ್‌ಬಿಸಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಭಾಗ್ಯಶ್ರೀ ಡಿ. ಹುಬ್ಳಿಕರ್ ಅವರನ್ನು ಗೌರವಿಸಲಾಗುವುದು.  ಕಾರ್ಯದರ್ಶಿ ಮಮತಾ ನಾಗರಾಜ್ ಉಪಸ್ಥಿತರಿರುವರು.

error: Content is protected !!