ನಗರದಲ್ಲಿ ಇಂದು ಶಿಕ್ಷಕರ ದಿನಾಚರಣೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉತ್ತರ ವಲಯ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ,   ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಶಿವಧ್ಯಾನ ಮಂದಿರದಲ್ಲಿ ಶಿಕ್ಷಕರ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ, ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ರಾಜಯೋಗಿನಿ ಬ್ರಹ್ಮಾಕುಮಾರಿ ಪದ್ಮಾಜಿ `ಶಿಕ್ಷಣ ಕ್ಷೇತ್ರದಲ್ಲಿ ಮೌಲ್ಯ ಶಿಕ್ಷಣ ಅಗತ್ಯ’ ಕುರಿತು ಉಪನ್ಯಾಸ ನೀಡುವರು.

ಮುಖ್ಯ ಅತಿಥಿಗಳಾಗಿ ಡಿಡಿಪಿಐ ಜಿ. ಕೊಟ್ರೇಶ್, ಬಿಇಓ ಹೆಚ್.ಆರ್. ಶೇರ್ ಅಲಿ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ವಿ. ಪಸೀಹ ಉದ್ದೀನ್ ಶಾಕೀರ್, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಹೆಚ್.ಆರ್. ವಿಶ್ವನಾಥ್,  ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ, ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಿ. ಅಜಯ್, ಜಿಲ್ಲಾಧ್ಯಕ್ಷ ಎನ್.ಹೆಚ್. ರಾಜಪ್ಪ, ಜಿಲ್ಲಾ ಕಾರ್ಯದರ್ಶಿ ತಮ್ಮನಗೌಡ ಕೆರೂರು, ಜಿಲ್ಲಾ ಕೋಶಾಧ್ಯಕ್ಷ ಬಿ.ಹೆಚ್. ದಾದಾಪೀರ್, ನಿಕಟ ಪೂರ್ವ ಅಧ್ಯಕ್ಷ ಎಂ. ಗುರುಸಿದ್ಧಸ್ವಾಮಿ ಭಾಗವಹಿಸಲಿದ್ದು,  ನಿಲುವಂಜಿ ಮಠದ ಕೊಟ್ರಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. 

error: Content is protected !!