ನಗರದ ಎಸ್‌ಎಸ್‌ಐಎಂಎಸ್‌ನಲ್ಲಿ ಇಂದು ಅಧಿವೇಶನ

ದಾವಣಗೆರೆ, ಸೆ. 19- ನಗರದ ಎಸ್.ಎಸ್. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ನಾಳೆ ದಿನಾಂಕ 20 ಹಾಗೂ 21 ರಂದು ಎರಡು ದಿನಗಳ ಕಾಲ ಇಂಡಿಯನ್ ಅಸೋಸಿಯೇಷನ್ ಆಫ್ ಪ್ರಿವೆಂಟಿವ್ ಅಂಡ್ ಸೋಶಿಯಲ್ ಮೆಡಿಷನ್ ರಾಜ್ಯ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಡಾ. ಅಶ್ವಿನ್ ಕುಮಾರ್ ಹೇಳಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 20 ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಲಿದ್ದಾರೆಂದು ತಿಳಿಸಿದರು.

ವೈದ್ಯರು, ವಿಜ್ಞಾನಿಗಳಿಗಾಗಿ ಅವರ ವಿಜ್ಞಾನಾತ್ಮಕ ಫಲಿತಾಂಶಗಳು, ಪೇಟೆಂಟ್‌ಗಳು ಹಾಗೂ ಉತ್ಪನ್ನಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಿಕೊಡ ಲಾಗಿದೆ. ಕಾರ್ಯಕ್ರಮಕ್ಕೆ ಮೇಜರ್ ಜನರಲ್ ಅತುಲ್ ಕೊತ್ವಾಲ್ ಆಗಮಿಸ ಲಿದ್ದಾರೆಂದರು. ಪತ್ರಿಕಾಗೋಷ್ಠಿಯಲ್ಲಿ ಡಾ. ಬಿ. ಆಶಾ, ಡಾ. ವಿದ್ಯಾ ವಿ. ಪಾಟೀಲ್, ಡಾ.ಹೆಚ್.ಸಿ. ರಂಗನಾಥ್ ಉಪಸ್ಥಿತರಿದ್ದರು. 

error: Content is protected !!