ಬೆಳ್ಳೂಡಿಯಲ್ಲಿಂದು ರಕ್ತದಾನ ಶಿಬಿರ

ಬೆಳ್ಳೂಡಿ ಗ್ರಾಮದ ಪಟೇಲ್ ಗುರುಬಸಪ್ಪ ಪ್ರೌಢಶಾಲೆಯ ಆವರಣದಲ್ಲಿ ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆಯವರೆಗೆ ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್.ಮಲ್ಲಿಕಾರ್ಜುನ್ ಅವರ 57ನೇ ವರ್ಷದ ಜನ್ಮ ದಿನದ ಅಂಗವಾಗಿ ಎಸ್.ಎಸ್.ಆಸ್ಪತ್ರೆಯ ಸಹಯೋಗದಲ್ಲಿ ರಕ್ತದಾನ ಶಿಬಿರ ಮತ್ತು ವಿದ್ಯಾರ್ಥಿಗಳಿಗೆ ಡಿಕ್ಷನರಿ, ರೈತರಿಗೆ ಟಾರ್ಚ್, ಯುವಕರಿಗೆ ಟೀ-ಶರ್ಟ್ ವಿತರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾ.ಪಂ. ಮಾಜಿ ಸದಸ್ಯ ಬೆಳ್ಳೂಡಿ ಬಸವರಾಜ್ ತಿಳಿಸಿದ್ದಾರೆ.

error: Content is protected !!