ಸಿರಿಗೆೆರೆಯಲ್ಲಿ ಇಂದು ಶ್ರದ್ಧಾಂಜಲಿ ಕಾರ್ಯಕ್ರಮ, ಕೃತಿಗಳ ಲೋಕಾರ್ಪಣೆ

ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 32 ನೇ ಶ್ರದ್ಧಾಂಜಲಿ ಕಾರ್ಯಕ್ರಮ ಹಾಗೂ ಕೃತಿಗಳ ಲೋಕಾರ್ಪಣೆ ಇಂದು ಬೆಳಿಗ್ಗೆ 11 ಗಂಟೆಗೆ ಸಿರಿಗೆರೆಯಲ್ಲಿ ನಡೆಯಲಿದೆ.

ಡಾ. ಶಿವಮೂರ್ತಿ ಶಿವಾಚಾರ್ಯ  ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ. ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಧು ಸದ್ಧರ್ಮ ವೀರಶೈವ ಸಂಘದ ಅಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಗುರು ವಂದನೆ ಸಲ್ಲಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಡಾ.ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಈಶ್ವರ್ ಬಿ. ಖಂಡ್ರೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಎಂ. ಬಿದರಿ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಬಾವಿ, ಶಾಸಕ ಯು.ಬಿ. ಬಣಕಾರ್ ಭಾಗವಹಿಸಲಿದ್ದಾರೆ.  ಇದೇ ವೇಳೆ ತರಳಬಾಳು ಪ್ರಕಾಶನದ `ಸಾಹಿತ್ಯ ಸಿರಿ’ ಮಾಲಿಕೆಯ ಆತ್ಮ ನಿವೇದನೆ, ಸಂಕಲ್ಪ ಕೃತಿಗಳು ಲೋಕಾರ್ಪಣೆಗೊಳ್ಳ ಲಿವೆ. ಚಿತ್ರದುರ್ಗ ಶ್ರೀ ಗಾನಯೋಗಿ ಸಂಗೀತ ಬಳಗದ ತೋಟಪ್ಪ ಉತ್ತಂಗಿ ಅವರಿಂದ ವಚನ ಗೀತೆ ಹಾಗೂ ತರಳಬಾಳು ಕಲಾ ಸಂಘದ ಕಲಾವಿದರಿಂದ ವಚನ ನೃತ್ಯ ಕಾರ್ಯಕ್ರಮ ನಡೆಯಲಿದೆ. 

error: Content is protected !!