ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಪ್ರವಾಸೋದ್ಯಮ ದಿನಾಚರಣೆ ಹಾಗೂ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ವಜ್ರಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಾಸೋದ್ಯಮ ಮತ್ತು ಶಾಂತಿ ವಿಷಯದ ಸಮಾರೋಪ ಸಮಾರಂಭವನ್ನು ಇಂದು ಮಧ್ಯಾಹ್ನ 3 ಗಂಟೆಗೆ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಎಲ್.ಪಿ. ಮಧು ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಡಾ. ಎಂ. ಜೈರಾಜ್ ಚಿಕ್ಕಪಾಟೀಲ ವಹಿಸಲಿದ್ದಾರೆ. ಅತಿಥಿಗಳಾಗಿ ಸಹಾಯಕ ಪ್ರಾಧ್ಯಾಪಕ ಡಾ. ಸತೀಶ್ ಕುಮಾರ್ ಪಿ. ವಲ್ಲೇಪುರೆ ಭಾಗವಹಿಸಲಿದ್ದು, ಬೋಧನಾ ಸಹಾಯಕ ಎನ್. ದತ್ತಾತ್ರೇಯ ಭಟ್ಟ, ಎ. ನವೀನ್ ಕುಮಾರ್ ಉಪಸ್ಥಿತರಿರುವರು.
September 27, 2024