ಭದ್ರಾ ಕಾಲೇಜಿನಲ್ಲಿ ಸಂಕ್ರಾಂತಿ ಸಂಭ್ರಮ

ದಾವಣಗೆರೆ, ಜ.17- ನಗರದ ಭದ್ರಾ ಪದವಿ ಕಾಲೇಜ್ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ  ಮಕರ ಸಂಕ್ರಾಂತಿ ಹಬ್ಬವನ್ನು `ಭದ್ರಾ ಸುಗ್ಗಿ ಹಬ್ಬ’ವನ್ನಾಗಿ ವಿಶೇಷವಾಗಿ ಆಚರಿಸಲಾಯಿತು.

 ಸಾಂಸ್ಕೃತಿಕ ಉಡುಪುಗಳನ್ನು ತೊಟ್ಟ ವಿದ್ಯಾರ್ಥಿಗಳು ಎಳ್ಳು-ಬೆಲ್ಲವನ್ನು ಹಂಚುವ ಮೂಲಕ ಹಸನ್ಮುಖರಾಗಿ ನೃತ್ಯ ಮಾಡುತ್ತಾ, ಗುಂಪು-ಗುಂಪಾಗಿ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು.

ರಾಜ್ಯ ವಿವಿ ಮತ್ತು ಕಾಲೇಜು ಅಧ್ಯಾಪಕರ ಒಕ್ಕೂಟದ ಅಧ್ಯಕ್ಷ ಪ್ರೊ.ಸಿ.ಎಚ್. ಮುರುಗೇಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂತಹ ಕಾರ್ಯಕ್ರಮಗಳು ಉತ್ತಮ ಕಲಾ ಮತ್ತು ಸಂಸ್ಕೃತಿ ಮನೋಭಾವ ಬೆಳೆಸಲು ಸಹಕಾರಿಯಾಗಿವೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಭದ್ರಾ ಎಜುಕೇಷನ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಎಂ.ಸಂಕೇತ್ ಮತ್ತು ಪಿಯು ಕಾಲೇಜ್  ಪ್ರಾಂಶುಪಾಲ ಡಿ.ಚಂದ್ರಪ್ಪ ಉಪಸ್ಥಿತರಿದ್ದರು.  ಪದವಿ ಮತ್ತು ಸ್ನಾತಕೋತ್ತರ ಕಾಲೇಜ್ ಪ್ರಾಂಶುಪಾಲ ಪ್ರೊ.ಟಿ.ಮುರುಗೇಶ್ ಅಧ್ಯಕ್ಷತೆ ವಹಿಸಿದ್ದರು.

error: Content is protected !!