ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ, ಸೆ. 27 – ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ. ಮತ್ತು ಸಮಾನಾಂತರ,  ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಮತ್ತು  ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.15 ವರೆಗೆ  ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

error: Content is protected !!