ನವಿಲೆಯಲ್ಲಿ 18ರಿಂದ ಕೃಷಿ ಮತ್ತು ತೋಟಗಾರಿಕೆ ಮೇಳ

ದಾವಣಗೆರೆ, ಅ.13-  ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಇದೇ ದಿನಾಂಕ 18 ರಿಂದ 21 ರವರೆಗೆ ನವಿಲೆಯಲ್ಲಿನ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ಆಯೋಜಿಸಲಾಗಿದೆ.

ಕೃಷಿ-ತೋಟಗಾರಿಕೆ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡುವರು.  

ಈ ಮೇಳದಲ್ಲಿ ನೂತನ ಕೃಷಿ ಪದ್ದತಿ, ವಿವಿಧ ತಳಿಗಳ ಪರಿಚಯ, ಕೃಷಿಯಲ್ಲಿ ಆಧುನಿಕತೆ ಸೇರಿದಂತೆ ವಸ್ತುಪ್ರದರ್ಶನ ಮತ್ತು ಮಾಹಿತಿ ನೀಡಲಾಗುತ್ತದೆ. ರೈತರು ಮೇಳದಲ್ಲಿ ಭಾಗವಹಿಸಿ ಲಾಭ ಪಡೆಯಲು ಕೋರಲಾಗಿದೆ.

error: Content is protected !!