ಪತ್ರಿಕಾ ವಿತರಕರಿಗೆ ಎಲೆಕ್ಟ್ರಿಕ್‌ ಬೈಕ್‌ ಒದಗಿಸಲು ಆಗ್ರಹ

ದಾವಣಗೆರೆ, ಅ.14- ಪತ್ರಿಕಾ ವಿತರಕರಿಗೆ ಉಚಿತ ಎಲೆಕ್ಟ್ರಿಕ್‌ ಬೈಕ್‌ ಅಥವಾ ಹೆಚ್ಚು ಸಬ್ಸಿಡಿ ಮೊತ್ತದ ಎಲೆಕ್ಟ್ರಿಕ್‌ ಬೈಕ್‌ಗಳನ್ನು ನೀಡಲು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾ ಘಟಕದಿಂದ ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಗಿದೆ.

ನಿನ್ನೆ ನಗರಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಒಕ್ಕೂಟದ ಪದಾಧಿಕಾರಿಗಳು, ದೇಶಾದ್ಯಂತ 25 ಲಕ್ಷಕ್ಕೂ ಹೆಚ್ಚು ಪತ್ರಿಕಾ ವಿತರಕರಿದ್ದಾರೆ. ಮೊದಲು ಇವರ ಸರ್ವೇ ಕಾರ್ಯ ಆರಂಭವಾಗಬೇಕು. ಇದರ ಜೊತೆಯಲ್ಲಿ ಕರ್ನಾಟಕದಲ್ಲಿ 40,000 ಕ್ಕೂ ಹೆಚ್ಚು ವಿತರಕರಿದ್ದಾರೆ. ಇವರಿಗೆ ಇವಿಎಂ ಬೈಕ್‌ ಉಚಿತವಾಗಿ ಅಥವಾ ಸಬ್ಸಿಡಿಯನ್ನು ಹೆಚ್ಚಿಸಿ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಕೇಂದ್ರ ಸರ್ಕಾರದಿಂದ ಪತ್ರಿಕಾ ವಿತರಕರಿಗಾಗಿ ಕ್ಷೇಮಾಭಿವೃದ್ಧಿ ನಿಧಿಗೆ 50 ಕೋಟಿ ಮೀಸಲಿಡುವ ಕುರಿತು ಕೇಂದ್ರದ ಮೇಲೆ ಒತ್ತಡ ಹೇರಬೇಕು. ಸಂಸತ್ತಿನಲ್ಲಿ ಪತ್ರಿಕಾ ವಿತರಕರ ಬಗ್ಗೆ ಧ್ವನಿ ಎತ್ತುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಸಲ್ಲಿಸಲಾಯಿತು ಎಂದು ಒಕ್ಕೂಟದ ಎ.ಎನ್‌. ಕೃಷ್ಣ ತಿಳಿಸಿದ್ದಾರೆ.

error: Content is protected !!