ಹರಿಹರ : ಕೃಷಿ ಹೊಂಡ ನಿರ್ಮಾಣಕ್ಕೆ ಅರ್ಜಿ

ಹರಿಹರ, ಅ.17- ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಹರಿಹರ ತಾಲ್ಲೂಕಿನ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿದ್ದು, ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥಿನ್‌ ಹೊದಿಕೆ, ಡೀಸೆಲ್ ಪಂಪ್‌ಸೆಟ್ ಹಾಗೂ ಸೂಕ್ಷ್ಮ ನೀರಾವರಿ ಘಟಕವನ್ನು ಹೊಂದಿದೆ.

ಆಸಕ್ತ ರೈತರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಹಿಂದೆ ಕೃಷಿ ಹೊಂಡ ನಿರ್ಮಾಣ ಮಾಡಿಸದ ಕುರಿತು ಸಂಬಂಧಿಸಿದ ಗ್ರಾ.ಪಂ. ಹಾಗೂ ತಾಲ್ಲೂಕು ತೋಟಗಾರಿಕೆ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು ಎಂದು ಹರಿಹರ ಸಹಾಯಕ ಕೃಷಿ ನಿರ್ದೇಶಕ ಎ. ನಾರನಗೌಡ ತಿಳಿಸಿದ್ದಾರೆ.

error: Content is protected !!