ನಗರದ ಮಾಸಬ ಕಾಲೇಜಿನಲ್ಲಿ ಇಂದು ಜಾಗೃತಿ ಅರಿವು ಸಪ್ತಾಹ

ಮಾಸಬ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಮತ್ತು ಕರ್ನಾಟಕ ಲೋಕಾಯುಕ್ತ ಇವರುಗಳ ಸಂಯುಕ್ತಾಶ್ರಯದಲ್ಲಿ ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ-2024 ‘ದೇಶದ ಅಭಿವೃದ್ಧಿಗಾಗಿ, ಭ್ರಷ್ಟಾಚಾರ ಮುಕ್ತ ಭಾರತ’ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11ಕ್ಕೆ ನಗರದ ಶ್ರೀಮತಿ ಪಾರ್ವತಮ್ಮ ಸಭಾಂಗಣದಲ್ಲಿ ನಡೆಯಲಿದೆ.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಿ.ಸಿ. ನೀಲಾಂಬಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪುರೆ ಭಾಗವಹಿಸಲಿದ್ದಾರೆ. 

ಅತಿಥಿಗಳಾಗಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಕಲಾವತಿ, ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಸಿ. ಮಧುಸೂದನ್, ಬಿ.ಪ್ರಭು ಸೂರಿನ, ಪಿ. ಸರಳ ಪಾಲ್ಗೊಳ್ಳುವರು‌.ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಆರ್. ರಾಘವೇಂದ್ರ ಉಪಸ್ಥಿತರಿರುವರು.

error: Content is protected !!