ನಗರದಲ್ಲಿ ಇಂದು ಕಾಂಗ್ರೆಸ್ ಸಭೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಶೀಘ್ರ ನಡೆಯಲಿದ್ದು, ಈ ಚುನಾವಣೆಗೆ ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸುವ ಉದ್ದೇಶದಿಂದ  ದಾವಣಗೆರೆ ಜಿಲ್ಲೆಯಲ್ಲಿ ಪೂರ್ವಭಾವಿ ಸಭೆಯನ್ನು ಇಂದು  ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್.ಎಸ್.ಭವನದಲ್ಲಿ ಕರೆಯಲಾಗಿದೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಅಧ್ಯಕ್ಷತೆ ವಹಿಸುವರು. ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಮಯೂರ್ ಜಯಕುಮಾರ್ ಅವರು ಆಗಮಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

error: Content is protected !!