ಕ್ಷತ್ರಿಯ ಮರಾಠ ಸಮಾಜದ ನೂತನ ಭವಾನಿ ಕಲ್ಯಾಣ ಮಂಟಪದ ಉದ್ಘಾಟನೆ

ನಗರದಲ್ಲಿ ಇಂದು

ಜಿಲ್ಲಾ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ವತಿಯಿಂದ ಶ್ರೀ ಡಿ. ದೇವರಾಜ ಅರಸು ಬಡಾವಣೆ `ಬಿ’ ಬ್ಲಾಕ್‌ನಲ್ಲಿ ನೂತನ `ಭವಾನಿ ಕಲ್ಯಾಣ ಮಂಟಪ’ ಉದ್ಘಾಟನೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ ಎಂದು ಸಂಘದ ಗೌರವಾಧ್ಯಕ್ಷ ಯಶವಂತರಾವ್‌ ಜಾಧವ್‌ ತಿಳಿಸಿದರು.

ಬೆಂಗಳೂರಿನ ಗವಿಪುರಂ ಗೋಸಾಯಿ ಮಠದ ಮಂಜುನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಂಘದ ಡಿ. ಮಾಲತೇಶ್‌ ಜಾಧವ್‌ ಅಧ್ಯಕ್ಷತೆ ವಹಿಸುವರು.

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್‌. ಮಲ್ಲಿಕಾರ್ಜುನ್‌, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್‌, ಮಾಜಿ ಗೃಹ ಮಂತ್ರಿ ಪಿ.ಜಿ.ಆರ್. ಸಿಂಧ್ಯಾ, ಶಾಸಕ ಶ್ರೀನಿವಾಸ್‌ ಮಾನೆ, ಎಂ.ಜಿ. ಮೂಳೆ, ಮಾಜಿ ಸಚಿವ ಹೆಚ್‌. ಆಂಜನೇಯ ಹಾಗೂ ಡಾ. ಪ್ರಕಾಶ್‌ ಪಾಗೋಜಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

error: Content is protected !!