ಕಂಬಾರ `ಪದ್ಮಭೂಷಣ’ ರಾಜ್ಯದ ಐವರಿಗೆ `ಪದ್ಮ’ ಪ್ರಶಸ್ತಿ

ಕಂಬಾರ `ಪದ್ಮಭೂಷಣ' ರಾಜ್ಯದ ಐವರಿಗೆ `ಪದ್ಮ' ಪ್ರಶಸ್ತಿ - Janathavaniಬೆಂಗಳೂರು, ಜ. 25 – ಕೇಂದ್ರ ಸರ್ಕಾರ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಿದ್ದು ಹೆಸರಾಂತ ವೈದ್ಯ ಡಾ. ಬಿ.ಎಂ. ಹೆಗ್ಡೆ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.

ರಾಜ್ಯದ ಒಟ್ಟು ಐವರಿಗೆ ಈ ಬಾರಿ ಪದ್ಮ ಪ್ರಶಸ್ತಿಗಳು ದೊರೆತಿವೆ. ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರು ಕಲೆಯಲ್ಲಿ ಮಾಡಿದ ಸಾಧನೆಗಾಗಿ, ಸಾಹಿತ್ಯ ಕೃಷಿಗಾಗಿ ರಂಗಸ್ವಾಮಿ ಲಕ್ಷ್ಮಿನಾರಾಯಣ ಕಶ್ಯಪ್ ಹಾಗೂ ಕ್ರೀಡೆಗಾಗಿ ಕೆ.ವೈ. ವೆಂಕಟೇಶ್ ಅವರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಇಡೀ ರಾಜ್ಯ ನಿಮ್ಮ ಸಾಧನೆಗೆ ಹೆಮ್ಮೆ ಪಡುತ್ತಿದೆ ಎಂದಿದ್ದಾರೆ.

error: Content is protected !!