ಮೀಸಲಾತಿ ನಿಗದಿ ವರದಿ ನೀಡುವಂತೆ ಆಯೋಗ ಸೂಚನೆ

ದಾವಣಗೆರೆ, ಫೆ.3 – ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿ ದಂತೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ನಿಗದಿ ಪಡಿಸಲು ಕೈಗೊಂಡಿರುವ ಕ್ರಮದ ಕುರಿತು ವಿವರವಾದ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ. ತಾಲ್ಲೂಕಿನ ವ್ಯಾಪ್ತಿಯ ಗ್ರಾ.ಪಂ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗೆ ಸಾಫ್ಟ್‍ವೇರ್ ಸಹಾಯದಿಂದ ಮೀಸಲಾತಿ ನಿಗದಿ ಪಡಿಸಲಾಗಿದ್ದು, ಅದನ್ನು ರದ್ದುಪಡಿಸುವಂತೆ ಕೋರಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರನಾಯ್ಕ್ ಅವರು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಆಯೋಗದ ಅಧೀನ ಕಾರ್ಯದರ್ಶಿಗಳು ಈ ನಿರ್ದೇಶನ ನೀಡಿದ್ದಾರೆ.

error: Content is protected !!