ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ

ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ - Janathavaniದಾವಣಗೆರೆ, ಜು. 10 – ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತದೆ, ರೋಗ ಬರುವುದಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಅವರಿಗೆ, ಪೆಟ್ರೋಲ್ ಬೆಲೆ ಎಷ್ಟು ಹೆಚ್ಚಾಗಿದೆ ಎಂದರೆ ಜನ ಸೈಕಲ್‌ನಲ್ಲಿ ಓಡಾಡಬೇಕು  ಎಂಬ ಮಾತನಾಡುತ್ತಿದ್ದಾರೆ ಎಂದು ಕೇಳಿದಾಗ ಈ ರೀತಿ ಉತ್ತರಿಸಿದ್ದಾರೆ.

ಜನ ಸೈಕಲ್ ಏರುತ್ತಿದ್ದಾರೆ ಎಂಬ ಮಾತಿಗೆ ಈ ಉತ್ತರ ಎಂದು ಸ್ಪಷ್ಟವಾಗಿ ಹೇಳಿರುವ ಸಂಸದರು, ಕಚ್ಚಾ ತೈಲದ ಬೆಲೆ ಏರಿಕೆಯಿಂದ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಕಚ್ಚಾ ತೈಲ ಬೆಲೆ ಇಳಿಕೆಯಾದರೆ ಪೆಟ್ರೋಲ್ ಬೆಲೆಯೂ ಇಳಿಯಲಿದೆ. ಬೆಲೆ ಇಳಿಕೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸರ್ವ ಪ್ರಯತ್ನ ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

error: Content is protected !!