ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಾಗಿ ಸಲೀಂ ಅಹಮದ್

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಾಗಿ ಸಲೀಂ ಅಹಮದ್ - Janathavaniದಾವಣಗೆರೆ, ಫೆ. 26- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹಮದ್‍ರವರಿಗೆ ದಾವಣಗೆರೆ ಜಿಲ್ಲೆಯೂ ಸೇರಿದಂತೆ ತುಮಕೂರು, ಚಿತ್ರದುರ್ಗ, ಹಾವೇರಿ, ಗದಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕಾಂಗ್ರೆಸ್ ಉಸ್ತುವಾರಿ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಆಡಳಿತದ ಜವಾಬ್ದಾರಿಯ ಜೊತೆಗೆ ಕಾಂಗ್ರೆಸ್ ಸೇವಾದಳದ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆದೇಶ ಹೊರಡಿಸಿ ರುವುದಕ್ಕೆ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಹರ್ಷ ವ್ಯಕ್ತಪಡಿಸಿದ್ದಾರೆ. 

ಕಾಂಗ್ರೆಸ್ ಪಕ್ಷದ ಹಿರಿಯ ಅನುಭವಿ ರಾಜಕಾರಣಿ ಸಲೀಂ ಅಹಮದ್‍ರವರ ನೇಮಕದಿಂದ ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನ ಸಂಘಟನೆಗೆ ಆನೆ ಬಲ ಬಂದಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

error: Content is protected !!