ಕೋವಿಡ್‌ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ

ಕೋವಿಡ್‌ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಿ - Janathavaniಹೊನ್ನಾಳಿ, ಏ.24- ರಾಜ್ಯಾದ್ಯಂತ ಕೋವಿಡ್ ಎರಡನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜನರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಜನರಲ್ಲಿ ಮನವಿ ಮಾಡಿದ್ದರೆ.

ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿರುವ ರೇಣುಕಾಚಾರ್ಯ, ತಮಗೆ ಕೋವಿಡ್ ಸೋಂಕು ತಗುಲಿದೆ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಹೋಮ್ ಐಸೋಲೇ ಷನ್‍ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದು ನನ್ನ ಆರೋಗ್ಯ ಸ್ಥಿರವಾಗಿದೆ ಎಂದರು.

error: Content is protected !!