ಕಸಾಪ ಜಿಲ್ಲಾ ಸಮ್ಮೇಳನಾಧ್ಯಕ್ಷರಾಗಿ ಎನ್‌.ಟಿ. ಯರಿಸ್ವಾಮಿ : ಸ್ವಾಗತಾರ್ಹ

ದಾವಣಗೆರೆ, ಫೆ.28- ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಕೆನರಾ ಬ್ಯಾಂಕ್‌ ನಿವೃತ್ತ ಅಧಿಕಾರಿ ಎನ್‌.ಟಿ. ಯರಿಸ್ವಾಮಿ ಅವರನ್ನು ಆಯ್ಕೆ ಮಾಡಿರುವುದು ನಮ್ಮೆಲ್ಲರಿಗೆ ಹರ್ಷ ಉಂಟು ಮಾಡಿದೆ ಮತ್ತು  ಸ್ವಾಗತಾರ್ಹ ಎಂದು ಕೆನರಾ ಬ್ಯಾಂಕ್‌ ನಿವೃತ್ತ ಅಧಿಕಾರಿಗಳ ಒಕ್ಕೂಟದ ಕ್ಷೇತ್ರೀಯ ಕಾರ್ಯದರ್ಶಿ ಹೆಚ್‌. ನಾಗರಾಜ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎನ್‌.ಟಿ. ಯರಿಸ್ವಾಮಿ ಅವರು ಸುಮಾರು 40 ವರ್ಷಗಳ ಕಾಲ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಅದರಂತೆ ಸಾಹಿತ್ಯ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ವೃತ್ತಿ ಜತೆಗೆ ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿ 18 ಕೃತಿಗಳನ್ನು ಪ್ರಕಟಿಸಿದ ಹೆಗ್ಗಳಿಕೆ ಅವರದ್ದು. ಇದೀಗ ಅವರನ್ನು ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಗುರುತಿಸಿರುವುದು ಬ್ಯಾಂಕಿಂಗ್‌ ಕ್ಷೇತ್ರದ ಸಹೋದ್ಯೋಗಿಗಳಿಗೆ ಹರ್ಷ ತಂದಿದೆ ಎಂದು ತಿಳಿಸಿದರು.

ಒಕ್ಕೂಟದ ಜಿಲ್ಲಾಧ್ಯಕ್ಷ ಬಿ. ಮಲ್ಲಿಕಾರ್ಜುನಪ್ಪ, ರಾಮಚಂದ್ರಯ್ಯ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

error: Content is protected !!