ಸಿಎಂ ದೆಹಲಿ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ

ಸಿಎಂ ದೆಹಲಿ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ - Janathavaniದಾವಣಗೆರೆ, ಜ.18- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ. ಸಿಎಂ ಆಗಿ ಯಡಿಯೂರಪ್ಪ ಮುಂದಯವರೆಯಲಿದ್ದಾರೆ.  ಅವರ ದೆಹಲಿ ಭೇಟಿ ಬಗ್ಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು  ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ಪಕ್ಷದ ಹೈಕಮಾಂಡ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಹಾಗೂ ಸ್ಥಿತಿಗತಿಗಳ ಬಗ್ಗೆ ಸಮಾಲೋಚಿಸಿದ್ದಾರೆ. 

ಈ ಉದ್ದೇಶಕ್ಕೆ ದೆಹಲಿಗೆ ಹೋಗಿದ್ದರು. ಆದರೆ ಸಿಎಂ ಬದಲಾವಣೆ ಮಾಡಲಾಗುತ್ತದೆ ಎಂಬ ವಿಶೇಷ ಅರ್ಥ
ಸರಿಯಲ್ಲ ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಯಡಿಯೂರಪ್ಪ ಅವರು ಖಚಿತವಾಗಿ ವಿಸ್ತರಣೆ, ಪುನರ್‌ರಚನೆ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸಿಲ್ಲ. ಮಾಧ್ಯಮದಲ್ಲಿ ಚರ್ಚೆ ಆದಾಕ್ಷಣ ಆಗಿ ಬಿಡುತ್ತಾ‌. ಸಿಎಂ ಹೇಳಿದರೆ ಮಾತ್ರ ಅದಕ್ಕೆ ಪುಷ್ಟಿ ಬರುತ್ತೆ ಎಂದರು.

error: Content is protected !!