ಕೆ.ಎಸ್. ಈಶ್ವರಪ್ಪಗೆ ಮುಖ್ಯಮಂತ್ರಿ ಸ್ಥಾನಕ್ಕೆ ಒತ್ತಾಯ

ದಾವಣಗೆರೆ, ಜು.22- ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾಯಿಸುವುದಾದರೆ ಹಿಂದುಳಿದ ವರ್ಗದ ನಾಯಕ ಕೆ.ಎಸ್. ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನವನ್ನು ಕೊಡುವಂತೆ ಜಿಲ್ಲಾ ಹಾಲುಮತ ಮಹಾಸಭಾ ಒತ್ತಾಯಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾ ರಾಜ್ಯ ಸಂಚಾಲಕ ರಾಜು ಮೌರ್ಯ ಅವರು, ಈಗಾಗಲೇ ಲಿಂಗಾಯತ, ಒಕ್ಕಲಿಗ ಸಮುದಾಯಕ್ಕೆ ಪ್ರಾತಿನಿಧ್ಯತೆ ನೀಡಲಾಗಿದೆ. ಅದರಂತೆ ರಾಜ್ಯದ ಕುರುಬ ಸಮುದಾಯಕ್ಕೂ ಪ್ರಾತಿನಿಧ್ಯತೆ ನೀಡುವ ಮೂಲಕ ಸಾಮಾಜಿಕ ನ್ಯಾಯ ದೆೋರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಿ. ವೀರಣ್ಣ ಹಾಲೇಕಲ್ಲು, ದೀಟೂರು ಚಂದ್ರು, ಘನರಾಜ್, ಎಸ್.ಎಂ. ಸಿದ್ಧಲಿಂಗಪ್ಪ, ಜಿ.ಟಿ. ಪರಮೇಶ್, ಸಲ್ಲಳ್ಳಿ ಹನುಮಂತಪ್ಪ, ಕಾಂತೇಶ್ ಮತ್ತಿತರರಿದ್ದರು.

error: Content is protected !!