ಗ್ರಾ.ಪಂ. ಚುನಾವಣೆ: ಶುಷ್ಕ ದಿನ ಘೋಷಣೆ

ದಾವಣಗೆರೆ, ಮಾ.25- ಅವಧಿ ಪೂರ್ಣಗೊಂಡಿರುವ ಹಾಗೂ ತೆರವಾದ ಗ್ರಾ.ಪಂ.ಸದಸ್ಯರ ಸ್ಥಾನಗಳನ್ನು ತುಂಬಲು ಮಾ.29 ರಂದು ಮತದಾನ ನಡೆಯಲಿರುವ ಗ್ರಾ.ಪಂ. ವ್ಯಾಪ್ತಿಯಲ್ಲಿ  ನಾಡಿದ್ದು ದಿನಾಂಕ 27 ರ ಸಂಜೆ 5 ಗಂಟೆಯಿಂದ ದಿನಾಂಕ 29 ರ ಸಂಜೆ 5 ಗಂಟೆವರೆಗೆ ಶುಕ್ಷ ದಿನ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿರುತ್ತಾರೆ.

ಗ್ರಾಮ ಪಂಚಾಯ್ತಿ ಸಂಖ್ಯೆ 37- ಬೇತೂರು, 40-ಕನಗೊಂಡನಹಳ್ಳಿ, 41-ಕುಕ್ಕುವಾಡ ಹಾಗೂ ಹೊನ್ನಾಳಿ ತಾಲ್ಲೂಕಿಗೆ ಸಂಬಂಧಿಸಿದಂತೆ ಅಭ್ಯರ್ಥಿ ಮರಣದಿಂದ ತೆರವಾದ ಸಂಖ್ಯೆ 7-ಅರಬಗಟ್ಟೆ ಗ್ರಾಮ ಪಂಚಾಯ್ತಿಗಳಲ್ಲಿ ಸದಸ್ಯರ ಸ್ಥಾನ ತುಂಬಲು ದಿನಾಂಕ 29 ರಂದು ಸಂಜೆ 5 ರವರೆಗೆ ಶುಷ್ಕ ದಿನವೆಂದು ಘೋಷಿಸಲಾಗಿದೆ.

ಈ ಅವಧಿಯಲ್ಲಿ ಎಲ್ಲಾ ಮದ್ಯದಂಗಡಿಗಳನ್ನು  ಮತ್ತು ಮದ್ಯ ತಯಾರಿಕಾ ಘಟಕಗಳನ್ನು ಅದರ ಮಾಲೀಕರು, ಅಧಿಭೋಗದಾರರು ಮತ್ತು ಸಂದರ್ಭಾನುಸಾರ ವ್ಯವಸ್ಥಾಪಕರು ಮುಚ್ಚತಕ್ಕದ್ದು ಹಾಗೂ ಮೊಹರು ಮಾಡಿ ಅದರ ಕೀಯನ್ನು ಸಂಬಂಧಿಸಿದ ತಾಲ್ಲೂಕಿನ  ಕಾರ್ಯ ನಿರ್ವಾಹಕ ಮ್ಯಾಜಿಸ್ಟ್ರೇಟರಿಗೆ ಒಪ್ಪಿಸತಕ್ಕದ್ದು. ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಯಾರಾದರೂ ಮದ್ಯವನ್ನು ಸ್ವಾಧೀನದಲ್ಲಿಟ್ಟುಕೊಂಡಿರುವುದು ಅಥವಾ ಮದ್ಯವನ್ನು ಸೇವಿಸಿ ಬೀದಿಯಲ್ಲಿ ರಂಪಾಟ ಮಾಡುತ್ತಿರುವುದು ಕಂಡು ಬಂದರೆ ಚುನಾವಣೆ ಮುಗಿಯುವವರೆಗೆ ಕಸ್ಟಡಿಯಲ್ಲಿಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

error: Content is protected !!