ಏತ ನೀರಾವರಿಗೆ ಹೆಚ್ಚುವರಿ 167 ಕೋಟಿ

ದಾವಣಗೆರೆ, ಅ.6- ಸಾಸ್ವೆಹಳ್ಳಿ ಏತ ನೀರಾವರಿ ಯೋಜನೆಗೆ 167 ಕೋಟಿ ರೂ. ಮಂಜೂರಾತಿ ದೊರಕಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಕರ್ನಾಟಕ ನೀರಾವರಿ ನಿಗಮ, ಮಂಡಳಿ ಸಭೆಯಲ್ಲಿ ಈ ಮಂಜೂರಾತಿ ದೊರೆತಿದೆ.

ಈಗಾಗಲೇ ನಡೆಸಿದ ಸರ್ವೆ ವರದಿಯಲ್ಲಿ ಕಂಡುಬಂದ ನ್ಯೂನತೆಗಳನ್ನು ಸರಿಪಡಿಸಿ, ಕೆಲವೊಂದು ಕೆರೆಗಳಿಗೆ ಸಾಮರ್ಥ್ಯಕ್ಕೆ ತಕ್ಕಂತೆ ನೀರು ಹರಿಸಲು ಈ ಯೋಜನೆಗೆ ಹೆಚ್ಚುವರಿಯಾಗಿ 167 ಕೋಟಿ ರೂ. ಕ್ರಿಯಾ ಯೋಜನೆ ಸಿದ್ದಪಡಿಸಿ ಸಿ.ಎಂ ಗೆ ಸಲ್ಲಿಸಲಾಗಿತ್ತು.

ಲೋಕಸಭಾ ಅಧಿವೇಶನದ ವೇಳೆ ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳಿಗೆ ಸಂಸದ ಸಿದ್ದೇಶ್ವರ ಅವರು ಸಾಸ್ವೆಹಳ್ಳಿ ಏತ ನೀರಾವರಿ ಯೋಜ ನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡುವ ಅಗತ್ಯತೆ ಕುರಿತು ಮನವರಿಕೆ ಮಾಡಿಕೊಟ್ಟಿದ್ದಾರೆ.

error: Content is protected !!