ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯುಗಧರ್ಮ ರಾಮಣ್ಣ ಅಧ್ಯಕ್ಷ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಯುಗಧರ್ಮ ರಾಮಣ್ಣ ಅಧ್ಯಕ್ಷ - Janathavaniಚನ್ನಗಿರಿ, ಜ.30- ದಾವಣಗೆರೆ ಜಿಲ್ಲಾ 12 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಬರುವ ಮಾರ್ಚ್ 4 ಮತ್ತು 5 ರಂದು ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ ಹೋಬಳಿಯ ಹರನಹಳ್ಳಿ – ಕೆಂಗಾಪುರ ಗ್ರಾಮದ ಶ್ರೀ ರಾಮಲಿಂಗೇಶ್ವರ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ. ಸಮ್ಮೇಳನಾಧ್ಯಕ್ಷರಾಗಿ ಜಾನಪದ ಕಲಾವಿದ, ಆಶುಕವಿ ಯುಗಧರ್ಮ ರಾಮಣ್ಣ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದ್ದಾರೆ.

error: Content is protected !!