ನಗರದಲ್ಲಿ ಇಂದು ಪುಟ್ಟರಾಜ ಕವಿ ಗವಾಯಿಗಳ 109ನೇ ಜಯಂತ್ಯೋತ್ಸವ, ಸಂಗೀತೋತ್ಸವ

ನಗರದಲ್ಲಿ ಇಂದು ಪುಟ್ಟರಾಜ ಕವಿ ಗವಾಯಿಗಳ 109ನೇ ಜಯಂತ್ಯೋತ್ಸವ, ಸಂಗೀತೋತ್ಸವ - Janathavaniಗಾನಯೋಗಿ ಶಿವಯೋಗಿ ಲಿಂ. ಡಾ. ಪಂ ಪುಟ್ಟರಾಜ ಕವಿ ಗವಾಯಿಗಳವರ 109ನೇ ಜಯಂತ್ಯೋತ್ಸವ ಕಾರ್ಯಕ್ರಮವು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ  ಇಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಕಲ್ಲಯ್ಯಜ್ಜನವರು ಸಾನ್ನಿಧ್ಯ ವಹಿಸಿಲಿದ್ದು, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸಮಾರಂಭವನ್ನು ಉದ್ಘಾಟಿಸುವರು. ಹಿರಿಯ ಲೆಕ್ಕ ಪರಿಶೋಧಕ ಅಥಣಿ ಎಸ್.ವೀರಣ್ಣ, ವೀರೇಶ್ವರ ಪುಣ್ಯಾಶ್ರಮದ ಕಾರ್ಯ ದರ್ಶಿ ಎ.ಹೆಚ್.ಶಿವಮೂರ್ತಿ ಸ್ವಾಮಿ, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ್ ಉಪಸ್ಥಿತರಿರುವರು.

ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್.ಶಿವಯೋಗಿಸ್ವಾಮಿ, ಮಹಾಪೌರರಾದ ಶ್ರೀಮತಿ ಜಯಮ್ಮ ಗೋಪಿನಾಯ್ಕ, ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ. ಎಂ. ಮಂಜುನಾಥ, ಜೈನ್ ಪಬ್ಬಿಕ್ ಸ್ಕೂಲ್ ಪ್ರಾಂಶುಪಾಲ ಎಸ್. ನಾಗರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಇದೇ ಸಂದರ್ಭದಲ್ಲಿ ಸಂಗೀತ ಕಾರ್ಯಕ್ರಮ ಏರ್ಪಾಡಾಗಿದ್ದು, ಈ ಕಾರ್ಯಕ್ರಮವನ್ನು ಶಿವಮೊಗ್ಗದ ಶ್ರೀ ಆರ್.ಬಿ.ಸಂಗಮೇಶ್ವರ ಗವಾಯಿಗಳವರು ಉದ್ಘಾಟಿಸವರು.

error: Content is protected !!