ನಗರದಲ್ಲಿ ಇಂದು ಶ್ರೀ ಸದ್ಯೋಜಾತ ಸ್ವಾಮೀಜಿ ಸ್ಮರಣೋತ್ಸವ

ನಗರದಲ್ಲಿ ಇಂದು ಶ್ರೀ ಸದ್ಯೋಜಾತ ಸ್ವಾಮೀಜಿ ಸ್ಮರಣೋತ್ಸವ - Janathavaniಶ್ರೀ ಡಾ. ಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಗಳ 15ನೇ ಸಂಸ್ಮರೋಣೋತ್ಸವವು ಇಂದು ಸಂಜೆ 6 ಗಂಟೆಗೆ ಸದ್ಯೋಜಾತ ಮಠದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಉಜ್ಜಯಿನಿ ಪೀಠದ ಶ್ರೀ ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿ ವಹಿಸಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ‘ಸಮಾಜಕ್ಕೆ ಸ್ವಾಮೀಜಿಗಳ ಕೊಡುಗೆ’ ವಿಷಯ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಂ. ದಾರುಕೇಶ್ ಉಪನ್ಯಾಸ ನೀಡಲಿದ್ದಾರೆ. ಕೈಗಾರಿಕೋದ್ಯಮಿ ಅಥಣಿ ಎಸ್. ವೀರಣ್ಣ, ಜವಳಿ ಉದ್ಯಮಿ ಬಿ.ಸಿ. ಉಮಾಪತಿ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.

error: Content is protected !!