ಇಂದಿನಿಂದ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು

ದಾವಣಗೆರೆ, ಮಾ.10- ಭದ್ರಾ ಜಲಾಶಯದಿಂದ ತುಂಗಭದ್ರಾ ಎಡದಂಡೆ ನಾಲೆಯ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತ ಬೆಳೆಗಳಿಗೆ ಇಂದಿನಿಂದ ದಿನಾಂಕ 21 ರವರೆಗೆ ಪ್ರತಿ ದಿನ 2000 ಕ್ಯೂಸೆಕ್ಸ್‍ನಂತೆ ನೀರನ್ನು ಹರಿಸಲಾಗುತ್ತದೆ. ರೈತ ಬಾಂಧವರು ನದಿ ದಂಡೆಯಲ್ಲಿ ಅಳವಡಿಸಿರುವ ಪಂಪ್‍ಸೆಟ್‍ಗಳಿಂದ ಅಕ್ರಮವಾಗಿ ನೀರೆತ್ತುವುದನ್ನು ಹಾಗೂ ನದಿ ಪಾತ್ರದಲ್ಲಿ ಸಾರ್ವಜನಿಕರು  ತಿರುಗಾಡುವುದಾಗಲೀ, ದನಕರುಗಳನ್ನು ನದಿಗೆ ಇಳಿಸುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧೀಕ್ಷಕ ಅಭಿಯಂತರು ತಿಳಿಸಿದ್ದಾರೆ.

error: Content is protected !!