ಚಿಗಟೇರಿ ಆಸ್ಪತ್ರೆಯ ಹೊರಗುತ್ತಿಗೆ ನೌಕರರಿಂದ ನಗರದಲ್ಲಿ ಇಂದು ಧರಣಿ

ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಹೊರಗುತ್ತಿಗೆ ದಿನಗೂಲಿ ನೌಕರರು ಸುಮಾರು ವರ್ಷಗಳಿಂದ ಹೊರಗುತ್ತಿಗೆ ಕಾರ್ಮಿಕರಾಗಿ ಆಸ್ಪತ್ರೆಯನ್ನು ಶುಚಿಗೊಳಿಸುವುದರೊಂದಿಗೆ ಕೋವಿಡ್‌ ಸಮಯದಲ್ಲಿ ಜೀವದ ಹಂಗನ್ನು ತೊರೆದು, ಹಲವಾರು ಜನಕ್ಕೆ ಕೋವಿಡ್‌ ಬಂದರೂ ಕೂಡ ಕಾರ್ಯ ನಿರ್ವಹಿಸಿದ್ದು, ಅವರಿಗೆ ರಿಸ್ಕ್‌ ಅಲೋಯನ್ಸ್ ಮಂಜೂರು ಮಾಡಲು ಆಗ್ರಹಿಸಿ  ಇಂದು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಧರಣಿ ಹಮ್ಮಿಕೊಳ್ಳುತ್ತಿದೆ ಎಂದು ಡಾ. ಬಿ.ಆರ್. ಅಂಬೇಡ್ಕರ್‌ ಸರ್ಕಾರಿ ಆಸ್ಪತ್ರೆಗಳ ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಿ. ಹನುಮಂತಪ್ಪ ತಿಳಿಸಿದ್ದಾರೆ.

error: Content is protected !!