ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ (ಭೈರತಿ) ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ. ಇಂದು ರಾತ್ರಿ 9ಕ್ಕೆ ನಗರಕ್ಕಾಗಿಸುವ ಅವರು, ವಾಸ್ತವ್ಯ ಮಾಡುವರು. ನಾಳೆ ಶನಿವಾರ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಮಧ್ಯಾಹ್ನ 3ಕ್ಕೆ ಬಿಜೆಪಿ ಏರ್ಪಡಿಸಿರುವ ವಿಜಯ ಸಂಕಲ್ಪ ಯಾತ್ರೆಯ ಮಹಾಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 6.15ಕ್ಕೆ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸುವರು.
July 23, 2024