ದಕ್ಷಿಣಕ್ಕೆ ಬಿಜೆಪಿ ಟಿಕೆಟ್ ನೀಡುವಂತೆ ಉಮಾ ಪ್ರಕಾಶ್ ಮನವಿ

ದಕ್ಷಿಣಕ್ಕೆ ಬಿಜೆಪಿ ಟಿಕೆಟ್ ನೀಡುವಂತೆ ಉಮಾ ಪ್ರಕಾಶ್ ಮನವಿ - Janathavaniದಾವಣಗೆರೆ, ಏ. 3 – ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತನಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗೂ ಹಾಲಿ ಸದಸ್ಯೆ ಶ್ರೀಮತಿ ಉಮಾ ಪ್ರಕಾಶ್ ಅವರು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರಿಗೆ ಅರ್ಜಿ ಸಲ್ಲಿಸಿದ್ದಾರೆ. 

ದಕ್ಷಿಣ ಕ್ಷೇತ್ರದಲ್ಲಿ ಓಬಿಸಿ ಆಧಾರದಲ್ಲಿ ಟಿಕೆಟ್ ನೀಡುವುದಾದರೆ ತಮಗೆ ನೀಡಿ, ಮಹಿಳೆಯರಿಗೆ ಪ್ರಾತಿನಿಧ್ಯ ಕೊಟ್ಟಂತಾಗುತ್ತದೆ. ಕಳೆದ 20 ವರ್ಷಗಳಿಂದಲೂ ಪಕ್ಷಕ್ಕಾಗಿ ದುಡಿದಿದ್ದೇನೆ ಎಂದು ಅವರು ತಿಳಿಸಿದ್ದಾರೆ. 

2007 ರಲ್ಲಿ ಬಿಜೆಪಿಯಿಂದ ಮಹಾನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿ ಜಯ ಗಳಿಸಿ ಮಹಾಪೌರರಾಗಿ   ಕಾರ್ಯ ನಿರ್ವಹಿಸಿದ್ದೇನೆ.  2019 ರಲ್ಲಿ ನಡೆದ   ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಎರಡನೇ ಬಾರಿ ಆಯ್ಕೆಯಾಗಿದ್ದೇನೆ. ಯೋಜನೆ ಮತ್ತು ಕಾಮಗಾರಿ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಅನುಭವ ಹೊಂದಿದ್ದೇನೆ ಎಂದು ಅವರು ವರಿಷ್ಠರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ತಿಳಿಸಿದ್ದಾರೆ. 

error: Content is protected !!