ಗುಂಡು ಹಾರಿಸಿಕೊಂಡು ಯೋಧ ಹದಡಿಯ ನಾಗರಾಜ್ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಯೋಧ ಹದಡಿಯ ನಾಗರಾಜ್ ಆತ್ಮಹತ್ಯೆ - Janathavaniದಾವಣಗೆರೆ, ಏ.3-  ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಯೋಧರೊಬ್ಬರು ಗುಂಡು ಹಾರಿಸಿಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲ್ಲೂಕಿನ ಹದಡಿ ಗ್ರಾಮದ ನಾಗರಾಜು (32) ಆತ್ಮಹತ್ಯೆ ಮಾಡಿಕೊಂಡವರು.  ಪಂಜಾಬ್​-ಹರಿಯಾಣ ಸೆಕ್ರೆಟರಿಯೇಟ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಭಾನುವಾರ ಬೆಳಗಿನ ಜಾವ 4.30ರ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಚಂಡೀಗಢದಲ್ಲಿರುವ ಪಂಜಾಬ್‌–​ ಹರಿಯಾಣ ಸೆಕ್ರೆಟರಿಯೇಟ್‌ನಲ್ಲಿ ನಾಗರಾಜು ಅವರು 6 ವರ್ಷಗಳ ಹಿಂದೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.

ನಾಗರಾಜು ಹದಡಿಯ ಹನುಮಮ್ಮ ಅವರ ಪುತ್ರ. ಮೂರು ವರ್ಷಗಳ ಹಿಂದೆ ದಾವಣಗೆರೆಯ ಶಿಲ್ಪಾ ಅವರನ್ನು ವಿವಾಹವಾಗಿದ್ದು, ಇಬ್ಬರು ಪುತ್ರಿಯರು ಇದ್ದಾರೆ.

error: Content is protected !!