ದಾವಣಗೆರೆ, ಮೇ 9 – ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನದ ವತಿಯಿಂದ 2023-24ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಶೇ.85ರಷ್ಟು ಫಲಿತಾಂಶ ಪಡೆದ ದೈವಜ್ಞ ಸಮಾಜದ ಮಕ್ಕಳಿಗೆ `ಶಾರದಾ ಪುರಸ್ಕಾರ’ ರಾಜ್ಯ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಸಂಸ್ಥಾಪಕ ಡಾ. ನಲ್ಲೂರು ಅರುಣಾಚಲ ಎನ್. ರೇವಣಕರ್ ತಿಳಿಸಿದ್ದಾರೆ.
ಜೂ.16 ರಂದು ಗೌರಮ್ಮ ನರಹರಿ ಶೇಟ್ ಸಭಾಂಗಣದಲ್ಲಿ ಖ್ಯಾತ ಹಿರಿಯ ಸಾಹಿತ್ಯ ದಿಗ್ಗಜರಿಂದ ಸನ್ಮಾನ ಕಾರ್ಯ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9341969084, 8147263552 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.