ಡಾ.ಎಸ್.ಎಂ. ಎಲಿ ಅವರಿಗೆ ಸನ್ಮಾನ

ದಾವಣಗೆರೆ, ಆ.2- ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ನಗರದ ಹಿರಿಯ ವೈದ್ಯ ಡಾ. ಎಸ್.ಎಂ. ಎಲಿ ಅವರಿಗೆ ಬೆಂಗಳೂರಿನ ಆತ್ಮಶ್ರೀ ಕನ್ನಡ ಸಾಂಸ್ಕೃ ತಿಕ ಪ್ರತಿಷ್ಠಾನದ ವತಿಯಿಂದ `ಕರ್ನಾ ಟಕ ಭೂಷಣ ಪ್ರಶಸ್ತಿ’ ನೀಡಲಾಗಿದೆ. ಡಾ. ಎಲಿ ಅವರ ಸ್ವಗೃಹಕ್ಕೆ ಭೇಟಿ ನೀಡಿದ  ಸಂಸ್ಥೆಯ ಅಧ್ಯಕ್ಷರೂ, ಚಲನಚಿತ್ರ ನಿರ್ದೇಶಕರೂ ಆದ ಡಾ. ಗುಣವಂತ ಮಂಜು ಅವರು ಡಾ. ಎಲಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು. 

ಚಲನಚಿತ್ರ ನಿರ್ಮಾಪಕ ಯಜಮಾನ್ ರಾಜೇಂದ್ರ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ಸತ್ಯನಾರಾಯಣ ಕ್ಯಾಂಪ್‌ನ ಡಾ. ರಾಮಾಂಜನೇಯ ಸ್ವಾಮಿ, ಪತ್ರಿಕಾ ವಿತರಕ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!