ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಬಾಕಿ ಅನುದಾನ ಬಿಡುಗಡೆಗೆ ಮನವಿ

ದಾವಣಗೆರೆ, ಆ.17- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಪ್ರಸ್ತುತ ಚಾಲ್ತಿಯಲ್ಲಿರುವ ಸ್ಕೀಂಗಳ ಅನುದಾನ ಬಿಡುಗಡೆಯಾಗದೆ ಬಾಕಿ ಉಳಿದಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಸಿಂಡಿಕೇಟ್ ಬ್ಯಾಂಕ್ ಮಾಜಿ ನಿರ್ದೇಶಕ ಸಿ.ಆರ್.ನಸೀರ್ ಅಹ್ಮದ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು‌ ಬೆಂಗಳೂರಿನಲ್ಲಿ ಇಂದು ಭೇಟಿ ಮಾಡಿ, ಕೂಡಲೇ ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಿದರು.

error: Content is protected !!