ನಗರ ಪಾಲಿಕೆ ವಿರೋಧ ಪಕ್ಷದ ನಾಯಕರ ಕಚೇರಿ ಉದ್ಘಾಟನೆ

ದಾವಣಗೆರೆ, ಮೇ 23- ಮಹಾನಗರ ಪಾಲಿಕೆ  ವಿರೋಧ ಪಕ್ಷದ ನಾಯಕ ಎ. ನಾಗ ರಾಜ್‌ ಅವರ ಕಚೇರಿಯನ್ನು ಪಾಲಿಕೆ ಕಾರ್ಯಾ ಲಯದಲ್ಲಿ ಇಂದು  ಉದ್ಘಾಟಿಸಲಾಯಿತು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದ್ದರೂ ಬಿಜೆಪಿಯವರ ಭ್ರಷ್ಟಾಚಾರದಿಂದ ನಮಗೆ ಅಧಿಕಾರ ತಪ್ಪಿದ್ದು, ಮುಂದಿನ ದಿನಗಳಲ್ಲಿ ಮತ್ತೆ ನಾವು ಅಧಿಕಾರ ಪಡೆಯುವುದು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ವಿರೋಧ ಪಕ್ಷವಾಗಿ ಜವಾಬ್ದಾರಿ ಯುತ ಕಾರ್ಯ ನಿರ್ವಹಿಸಿ, ಬಿಜೆಪಿಯವರ ಭ್ರಷ್ಟಾಚಾರವನ್ನು ಬಯಲಿಗೆಳೆಯುವಂತೆ ಕಾಂಗ್ರೆಸ್ ಸದಸ್ಯರಿಗೆ ಎಸ್ಸೆಸ್  ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ದೂಡಾ ಆಯುಕ್ತ ಬಿ.ಟಿ.ಕುಮಾರ ಸ್ವಾಮಿ, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ , ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ, ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್, ಮಾಜಿ ನಗರಸಭಾಧ್ಯಕ್ಷ ಕೆ.ಜಿ. ಶಿವಕುಮಾರ್, ಮಾಜಿ ಮೇಯರ್ ರೇಖಾ ನಾಗರಾಜ್, ಮೇಯರ್ ಬಿ.ಜಿ.ಅಜಯ್ ಕುಮಾರ್, ಉಪ ಮೇಯರ್ ಶ್ರೀಮತಿ ಸೌಮ್ಯ ನರೇಂದ್ರ ಕುಮಾರ್ ಮತ್ತಿತರರು ವಿರೋಧ ಪಕ್ಷದ ನಾಯಕ ಎ. ನಾಗರಾಜ್ ಅವರಿಗೆ ಶುಭ ಕೋರಿದರು.

error: Content is protected !!