ಪತ್ರಕರ್ತರಿಂದ ಸಮಾಜದಲ್ಲಿರುವ ಅಂಕು ಡೊಂಕುಗಳನ್ನು ತಿದ್ದುವ ಕೆಲಸ

ಜಗಳೂರಿನ ಕಾರ್ಯಕ್ರಮದಲ್ಲಿ ಹೆಚ್.ಸಿ. ಮಹೇಶ್

ಜಗಳೂರು, ಜೂ.6- ಪತ್ರಕರ್ತರು ಸಮಾಜದಲ್ಲಿ ರುವ ಅಂಕು ಡೊಂಕುಗಳನ್ನು ತಿದ್ದುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಜಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಹೆಚ್.ಸಿ.ಮಹೇಶ್ ಹೇಳಿದರು.

ಪಟ್ಟಣದ ಪತ್ರಕರ್ತರ ಭವನದಲ್ಲಿ ಸಂಘದ ಕಚೇರಿಗೆ ಎರಡು ಫ್ಯಾನ್‌ ಗಳನ್ನು ರಿಮೋಟ್ ಒತ್ತುವುದರ ಮೂಲಕ ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿ, ಅವರು ಮಾತನಾಡಿದರು. 

ಲಾಕ್‌ಡೌನ್ ಸಮಯದಲ್ಲಿ ಕಷ್ಟದ ಪರಿಸ್ಥಿತಿಯಲ್ಲಿ ಜೀವದ ಆಸೆ ತೊರೆದು ತಮ್ಮ ಕಾಯಕದಲ್ಲಿ ತೊಡಗಿದ್ದಾರೆ. ಜೊತೆಗೆ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ ಎಂದರು.

ನಾನು ವೈಯಕ್ತಿಕವಾಗಿ ಸಂಘದ ಕಚೇರಿಗೆ ಫ್ಯಾನ್‌ಗಳನ್ನು ನೀಡಿದ್ದೇನೆ. ಶಾಸಕರು ಸಂಘದ ಕಟ್ಟಡ ನಿರ್ಮಾಣಕ್ಕೆ ಅನುದಾನ ಕೊಡುವುದು ಸೇರಿದಂತೆ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಶಾಸಕ ಎಸ್.ವಿ.ರಾಮಚಂದ್ರ ಈಡೇರಿಸುವ ಭರವಸೆ ವ್ಯಕ್ತ ಪಡಿಸಿದರು.

ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಿ.ಎಸ್. ಚಿದಾನಂದ್‌ ಮಾತನಾಡಿ, ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ಹೆಚ್.ಸಿ.ಮಹೇಶ್ ಸಂಘದ ಕಚೇರಿಗೆ ಎರಡು ಪ್ಯಾನ್ ಕೊಡುಗೆ ಕೊಟ್ಟಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಕ್ಷೇತ್ರದ ಶಾಸಕರು ಪತ್ರಕರ್ತರ ಭವನ ನಿರ್ಮಾಣ, ಪತ್ರಕರ್ತರಿಗೆ ನಿವೇಶನ ನೀಡಲು ಭರವಸೆ ನೀಡಿದ್ದಾರೆ. ಬಿಜೆಪಿ ಅಧ್ಯಕ್ಷರೂ ಸಹ ಒತ್ತಡ ತರುವ ಮೂಲಕ ಪತ್ರಕರ್ತರ ಬೇಡಿಕೆಗಳನ್ನು ಈಡೇ ರಿಸಿ ಕೊಡಬೇಕೆಂದು ಅಧ್ಯಕ್ಷರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ಮಾಜಿ ಉಪಾಧ್ಯಕ್ಷ ಬಿ.ಪಿ.ಸುಭಾನ್, ಪತ್ರಕರ್ತರಾದ ಲೋಕೇಶ್, ಸಿ.ಬಸವರಾಜು, ರಾಜಪ್ಪ, ಧನ್ಯಕುಮಾರ್, ರವಿಕುಮಾರ್, ಬಾಬು, ತಿಪ್ಪೇಸ್ವಾಮಿ, ಜೆ.ಓ.ಮಂಜಣ್ಣ, ಮಾರುತಿ, ರಕೀಬ್, ಮಂಜಪ್ಪ, ಜಗದೀಶ್ ಮುಖಂಡರಾದ ಚನ್ನಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

error: Content is protected !!