ಬಿಜೆಪಿಯ ಸಾಧನೆಗಳನ್ನು ಜನರಿಗೆ ತಿಳಿಸಲು ಕರೆ

ಜಿಲ್ಲಾ ಬಿಜೆಪಿಯ ಬಲಿದಾನ ದಿವಸ್‌ನಲ್ಲಿ ವೀರೇಶ್ ಹನಗವಾಡಿ

ದಾವಣಗೆರೆ, ಜೂ.24- ಜಿಲ್ಲಾ ಬಿಜೆಪಿ ವತಿಯಿಂದ  ಡಾ. ಶಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸ್ ಹಾಗೂ ಕರ್ನಾಟಕದ ಕೇಸರಿ ಜಗನ್ನಾಥರಾವ್ ಜೋಷಿಯವರ ಜನ್ಮ ದಿನೋತ್ಸವವನ್ನು ಪಕ್ಷದ ಕಚೇರಿಯಲ್ಲಿ ಇಂದು ಆಚರಿಸಲಾಯಿತು.

ಪಕ್ಷದ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ ಮಾತನಾಡಿ,  ನಮ್ಮ ಬಿಜೆಪಿ ಸರ್ಕಾರಗಳ ಸಾಧನೆ, ಯೋಜನೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ  ಜನರಿಗೆ ತಿಳಿಸುವ ಕೆಲಸ ಮಾಡಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಆನ್‍ಲೈನ್ ಲಿಂಕ್ ಕಳಿಸುವ ಮೂಲಕ ಬೂತ್ ಮಟ್ಟಕ್ಕೂ ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಕೆಲಸವಾಗಬೇಕು. 

ಈ ಮೂಲಕ ಎಂತಹ  ಪರಿಸ್ಥಿತಿಯಲ್ಲೂ ಪಕ್ಷದ ಕಾರ್ಯಕರ್ತರು ಜಾಗರೂಕರಾಗಿರಬೇಕು ಎಂದು ಕರೆ ನೀಡಿದರು.

ಶಾಸಕ ಎಸ್.ಎ. ರವೀಂದ್ರನಾಥ್, ಪೂರ್ಣಾವಧಿ ಕಾರ್ಯಕರ್ತ ಗಿರೀಶ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

error: Content is protected !!