ಪಕ್ಷದ ಸಂಘಟನೆಗೆ ಶ್ರಮಿಸುತ್ತೇನೆ : ಹನುಮಂತು

ಹರಪನಹಳ್ಳಿ, ಅ. 3 – ಜಿಲ್ಲೆಯಾದ್ಯಂತ ನಿರಂತರವಾಗಿ ಸಂಚರಿಸಿ ಪಕ್ಷದ ಸಂಘಟನೆಗೆ ಶ್ರಮಿಸುತ್ತೇನೆ ಎಂದು ಬಳ್ಳಾರಿ ಜಿಲ್ಲಾ ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ಹಾಗೂ ಚಲನಚಿತ್ರ ನಟ ಬಂಗಾರು ಹನುಮಂತು ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಹೊರ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಜ್ಯದಲ್ಲಿ ಕೋವಿಡ್ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ ಸೇವಾ ಹಿ ಸಂಘಟನ್ ಪರಿಕಲ್ಪನೆಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ,  ಪಂಡಿತ್ ದೀನ್ ದಯಾಳ್, ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಸೇವಾ ಸಪ್ತಾಹದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಯಿತು ಎಂದು ಅವರು ಹೇಳಿದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಸತ್ತೂರ್ ಡಿ.ಆರ್.ಹಾಲೇಶ್, ಜಿಲ್ಲಾ ಎಸ್ಟಿ ಮೋರ್ಚಾ ಕಾರ್ಯದರ್ಶಿ ಆರ್.ಲೋಕೇಶ್, ಉಪಾಧ್ಯಕ್ಷ ವೀರಣ್ಣ, ಪ್ರಧಾನ ಕಾರ್ಯದರ್ಶಿಗಳಾದ
ಕೆ.ರಾಮಕೃಷ್ಣ, ರಾಘವೇದ್ರ, ಸದಸ್ಯ
ಚೌಡಾಪುರದ ಷಣ್ಮುಖಪ್ಪ, ತಾಲ್ಲೂಕು ಬಿಜೆಪಿ ಹಿರಿಯ ಮುಖಂಡರಾದ ಬಾಗಳಿ ಕೊಟ್ರೇಶಪ್ಪ, ಎಂ.ಪಿ.ನಾಯ್ಕ್, ತಾಲ್ಲೂಕು ಬಿಜೆಪಿ ಎಸ್ಟಿ ಮೋರ್ಚಾ ಅಧ್ಯಕ್ಷ ನೀಲಗುಂದ ಟಿ.ಮನೋಜ್, ಉಪಾಧ್ಯಕ್ಷ ಆಲೂರು ಶ್ರೀನಿವಾಸ್, ತಾಲ್ಲೂಕು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ನೀಲಗುಂದ ಮಾಳ್ಗಿ ತಿಮ್ಮೇಶ್, ಪ್ರಧಾನ ಕಾರ್ಯದರ್ಶಿ ವಡ್ಡಿನ ದಾದಾಪುರದ ಟಿ.ಶಿವಾನಂದ್, ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಹರಿಯಮ್ಮನಹಳ್ಳಿ ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

error: Content is protected !!