ಹೊನ್ನಾಳಿ : ಕೆರೆಗೆ ತಡೆಗೋಡೆ ನಿರ್ಮಿಸಲು ಜಿಲ್ಲಾಡಳಿತಕ್ಕೆ ಮನವಿ

ಹೊನ್ನಾಳಿ, ಜು.11- ತಾಲ್ಲೂಕಿನ ಕೂಲಂಬಿ ಗ್ರಾಮದ ಹೊರ ವಲಯದಲ್ಲಿ ಪುರಾತನ ಕೆರೆ ಇದ್ದು,  ಕೆರೆ ಪಕ್ಕ ಬಸವಾಪಟ್ಟಣ-ದಾವಣಗೆರೆ ಜಿಲ್ಲಾ ಮುಖ್ಯ ರಸ್ತೆ ಹೊಂದಿಕೊಂಡಿದ್ದು, ಪ್ರತಿ ನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ಕಡಿದಾದ ತಿರುವು ಇರುವುದರಿಂದ ಯಾವ ಸಂದರ್ಭದಲ್ಲಿ ಯಾದರೂ ಅಪಘಾತವಾಗಬಹುದು. ಇದೇ ಮುಖ್ಯರಸ್ತೆಯಲ್ಲಿ ಕೂಲಂಬಿ-ಕುಂದೂರು ಮಧ್ಯ ಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜು ಇರುವುದರಿಂದ ನೂರಾರು ವಿದ್ಯಾರ್ಥಿಗಳು ಓಡಾಡುತ್ತಾರೆ.

ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕರ ಮತ್ತು ಪ್ರಯಾಣಿಕರ ಸುರಕ್ಷತೆ ಹಿತದೃಷ್ಟಿಯಿಂದ ರಸ್ತೆ ಅಗಲೀಕರಣ ಮಾಡಿ ರಸ್ತೆ ಅಕ್ಕ-ಪಕ್ಕ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೂಲಂಬಿ ಗ್ರಾಮದ ರೈತರು ರಸ್ತೆ ಬದಿ ಅರಣ್ಯ ಇಲಾಖೆ ಸಸಿಗಳನ್ನು ಹಾಕುವಂತಿಲ್ಲ. ತಕ್ಷಣ ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನ ಹರಿಸಿ ತಡೆಗೋಡೆ ನಿರ್ಮಿಸಿಕೊಡಬೇಕೆಂದು  ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

error: Content is protected !!