ಹರಪನಹಳ್ಳಿ : ಅರಸೀಕೆರೆ ಪಿಡಿಒ ವಿರುದ್ಧ ಕ್ರಮಕ್ಕೆ ಸಂಸದರ ಶಿಫಾರಸ್ಸು

ಹರಪನಹಳ್ಳಿ, ಆ.12- ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ವಿಫಲವಾಗಿರುವ ತಾಲ್ಲೂಕಿನ ಅರಸೀಕೆರೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಳ್ಳಾರಿ ಸಂಸದ ವೈ.ದೇವೇಂದ್ರಪ್ಪ ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಿದ್ದಾರೆ.

ಕೊರೊನಾ ವೈರಸ್ ತಡೆಗಟ್ಟಲು ಸರ್ಕಾರಗಳು ಟೊಂಕಕಟ್ಟಿ ಸ್ಥಳೀಯ ಆಡಳಿತಗಳಿಗೆ ಹೆಚ್ಚಿನ ಅವಕಾಶ ನೀಡಿವೆ. ಆದರೆ, ಅರಸೀಕೆರೆ ಗ್ರಾಮ ಪಂಚಾಯಿತಿ ಪಿಡಿಒ ಜವಾಬ್ದಾರಿ ಇಲ್ಲದೇ ಕರ್ತವ್ಯ ಲೋಪ ಮಾಡಿದ್ದಾರೆ ಎಂದು ಗ್ರಾಮದ ನಾಗರಿಕರು, ಕೊರೊನಾ ವಾರಿಯರ್ಸ್‌ಗಳಾದ ಡಾ. ಭುವನೇಶ್ವರಿ, ಸಿಆರ್‌ಪಿ ಇಸ್ಮಾಯಿಲ್, ಡಾ.ಎಂ.ಸುರೇಶ್, ಶಿಕ್ಷಕರಾದ ಅರ್ಜುನ್ ಪರಸಪ್ಪ, ಕಂದಾಯ ಇಲಾಖೆಯ ಸುರೇಶ್‌ ಹಾಗೂ ನರ್ಸ್‌ಗಳು ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!