ಚನ್ನಗಿರಿಯಲ್ಲಿ ಭವ್ಯ ಶ್ರೀನಿವಾಸ ಕಲ್ಯಾಣ ಮಹೋತ್ಸವ

ಚನ್ನಗಿರಿಯಲ್ಲಿ ಭವ್ಯ ಶ್ರೀನಿವಾಸ ಕಲ್ಯಾಣ ಮಹೋತ್ಸವ

ಚನ್ನಗಿರಿ, ಜ.6- ಸಮಾಜದ ಸ್ವಾಸ್ಥ್ಯಕ್ಕಾಗಿ ಪ್ರಾರ್ಥಿಸಿ, ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಮಾಡಾಳು ಮಲ್ಲಿಕಾರ್ಜುನ ಅವರು ಚನ್ನಗಿರಿಯ ತಾಲ್ಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಶ್ರೀನಿವಾಸ  ಕಲ್ಯಾಣ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಶ್ರೀ ರಾಘವೇಂದ್ರ ಮಠದಿಂದ ಚನ್ನಗಿರಿಯ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ನಂತರ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಆಯೋಜಿಸಿದ್ದ ತಾಲ್ಲೂಕು ಕ್ರೀಡಾಂಗಣಕ್ಕೆ ಮೆರವಣಿಗೆ ಸಾಗಿತು. ಸಂಜೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಕಾರ್ಯಕ್ರಮಕ್ಕೆ ತಿರುಮಲ ತಿರುಪತಿ ದೇವಸ್ಥಾನದಿಂದ ಆಗಮಿಸಿದ್ದ ಮತ್ತು ಎಸ್. ವೆಂಕಟೇಶ್ ಮೂರ್ತಿ ಮಾರ್ಗದರ್ಶನ ನೀಡಿ ದರು. ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಆಶೀರ್ವಾದ ಪಡೆದು ಕೊಂಡರು. ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರು, ಮಹಾವಿಷ್ಣು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಸಮಾಜಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿ, ಆಶೀರ್ವಾದ ಪಡೆಯಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದರು.

ಉತ್ತಮ ಮಳೆಯಾಗಿದ್ದು, ಇಂದು ಕೃಷಿ ಚಟುವಟಿಕೆ ಹೆಚ್ಚಳಕ್ಕೆ ನೆರವಾಗಿದೆ. ಈಗ ನಾವು ಹೊಸ ವರ್ಷಕ್ಕೆ ಕಾಲಿಟ್ಟಿದ್ದು, ಉತ್ತಮ ವರ್ಷಕ್ಕಾಗಿ ಪರಮಾತ್ಮನನ್ನು ಬೇಡುತ್ತೇವೆ ಎಂದು ಹೇಳಿದರು.

ಬಿಜೆಪಿ ಮುಖಂಡರಾದ ಗೋಪಿ, ಶಿವ ರಾಜ್, ಶ್ರೀನಿವಾಸ್ ಸೇರಿದಂತೆ ಬಿಜೆಪಿ ಕಾರ್ಯ ಕರ್ತರು, ಸಾರ್ವಜನಿಕರು ಭಾಗವಹಿಸಿದ್ದರು.

error: Content is protected !!