ಮಲೇಬೆನ್ನೂರಿನಲ್ಲಿ ಸಂಭ್ರಮದ ರಂಜಾನ್

ಮಲೇಬೆನ್ನೂರಿನಲ್ಲಿ ಸಂಭ್ರಮದ ರಂಜಾನ್

ಮಲೇಬೆನ್ನೂರು, ಏ. 22- ಪಟ್ಟಣದಲ್ಲಿ ಶನಿವಾರ ಮುಸ್ಲಿಂ ಬಾಂಧವರು ಪವಿತ್ರ ರಂಜಾನ್ ಹಬ್ಬ ವನ್ನು ಸಂಭ್ರಮದಿಂದ ಆಚರಿಸಿದರು.

ಒಂದು ತಿಂಗಳು ಕಾಲ ಶ್ರದ್ಧಾ-ಭಕ್ತಿಯಿಂದ ಉಪವಾಸ ವ್ರತ ಆಚರಿಸಿದ ಮುಸ್ಲಿಂ ಬಾಂಧವರು ಶುಕ್ರವಾರ ಸಂಜೆ ಚಂದ್ರದರ್ಶನ ಆದ ಹಿನ್ನೆಲೆಯಲ್ಲಿ ಶನಿವಾರ ಈದ್ ಉಲ್ ಫಿತ್ರ ಹಬ್ಬವನ್ನು ಹೊಸಬಟ್ಟೆಗಳನ್ನು ಧರಿಸಿ, ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ವಿನಿಮಯ ಮಾಡಿ ಕೊಳ್ಳುವ ಮೂಲಕ ಆಚರಿಸಿದರು.

ಬೆಳಿಗ್ಗೆ ಇಲ್ಲಿನ ಜಾಮೀಯಾ ಮಸೀದಿಯಿಂದ ಪಾದಯಾತ್ರೆ ಮೂಲಕ ಈದ್ಗಾ ಮೈದಾನಕ್ಕೆ ತೆರಳಿದ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ನಂತರ ಪರಸ್ಪರ ಶುಭಾಷಯ ವಿನಿಮಯ ಮಾಡಿಕೊಂಡರು.

ಸಂಜೆ ಕಾಂಗ್ರೆಸ್ ಅಭ್ಯರ್ಥಿ ನಂದಿಗಾವಿ ಶ್ರೀನಿವಾಸ್, ಜೆಡಿಎಸ್ ಅಭ್ಯರ್ಥಿ ಹೆಚ್.ಎಸ್. ಶಿವಶಂಕರ್ ಅವರು ಪಟ್ಟಣಕ್ಕೆ ಭೇಟಿ ನೀಡಿ ಮುಸ್ಲಿಂ ಬಾಂಧವರಿಗೆ ಶುಭಾಶಯ ಸಲ್ಲಿಸಿದರು.

ಭದ್ರತೆಗೆ ಸ್ಥಳೀಯ ಪೊಲೀಸರ ಜೊತೆಗೆ ಈ ಬಾರಿ ಸಿಐಎಸ್ಎಫ್ ಯೋಧರನ್ನೂ ನಿಯೋಜಿಸಲಾಗಿತ್ತು. ಪಿಎಸ್ಐ ಪ್ರಭು ಕೆಳಗಿನಮನಿ ಭದ್ರತೆಯ ನೇತೃತ್ವ ವಹಿಸಿದ್ದರು.

error: Content is protected !!