ಹರಿಹರ ಪಂಚಮಸಾಲಿ ಪೀಠಕ್ಕೆ ಬಿ.ಎಲ್. ಸಂತೋಷ್ ಭೇಟಿ

ಹರಿಹರ ಪಂಚಮಸಾಲಿ ಪೀಠಕ್ಕೆ ಬಿ.ಎಲ್. ಸಂತೋಷ್ ಭೇಟಿ

ಮಲೇಬೆನ್ನೂರು, ಮಾ. 8- ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠಕ್ಕೆ ಮಂಗಳವಾರ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.  ಸಂತೋಷ್ ಭೇಟಿ ನೀಡಿದರು.

ಮಠದ ಆವರಣದಲ್ಲಿ ಹರಧ್ಯಾನ ಮಂದಿರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಗುರುಪೀಠದ ಲಿಂಗೈಕ್ಯ ಡಾ. ಮಹಾಂತ ಶ್ರೀಗಳ ಗದ್ದುಗೆಗೆ ನಮಸ್ಕರಿಸಿದರು. ನಂತರ ಗುರುಪೀಠದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳೊಡನೆ ಚರ್ಚಿಸಿದರು.

ನಂತರ ಗುರುಪೀಠದ ವಚನಾನಂದ ಶ್ರೀಗಳ ಆಶೀರ್ವಾದ ಪಡೆದರು. ಶ್ರೀಗಳೊಡನೆ ಮಠದ ಆವರಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿದರು. ಹರಿಹರದ ತುಂಗಭದ್ರಾ ನದಿ ತಟದಲ್ಲಿ ನಿರ್ಮಾಣವಾಗುತ್ತಿರುವ ತುಂಗಭದ್ರಾರತಿ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು. ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಶಾಸಕ ಅರುಣ್ ಪೂಜಾರ್, ವಿಧಾನ ಪರಿಷತ್ ಸದಸ್ಯ ಕೆ.ಎನ್. ನವೀನ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ  ಹನಗವಾಡಿ ವೀರೇಶ್, ಕಾರ್ಯ ದರ್ಶಿ ಜಗದೀಶ್, ಸಂಘ ಪರಿವಾರದ ಮುಖಂಡ ಜೇಷ್ಟ ಪಡಿವಾಳ್, ಪೀಠದ ಟ್ರಸ್ಟಿಗಳಾದ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್, ನಗರಸಭೆ ಸದಸ್ಯೆ ಅಶ್ವಿನಿ ಕೃಷ್ಣ, ನಿರಂಜನ ದೀಟೂರು ಇದ್ದರು.

error: Content is protected !!