ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ

ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ

ಜಗಳೂರು, ಫೆ.22 – ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಅತಿ ಹಿಂದುಳಿದ ಕುಂಬಾರ ಜನಾಂಗದ ಅಭಿವೃದ್ಧಿಗಾಗಿ ಕುಂಬಾರ ಅಭಿವೃದ್ಧಿ ನಿಗಮ  ಸ್ಥಾಪಿಸಬೇಕೆಂದು ಒತ್ತಾಯಿಸಿ, ತಾಲ್ಲೂಕು ಕುಂಬಾರ ಯುವ ಸೇನಾ ಘಟಕ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ನಡೆದ `ಸಂತ ಕವಿ ಸರ್ವಜ್ಞ ಜಯಂತಿ’ ಸಮಾರಂಭದಲ್ಲಿ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸಮಾಜದ ಮುಖಂಡರಾದ ಶ್ರೀಮತಿ ಚೌಡಮ್ಮ, ಕೆ.ವಿ. ತಿಪ್ಪೇಸ್ವಾಮಿ, ನಾಗರಾಜು, ಚೌಡಪ್ಪ, ತಿಪ್ಪಮ್ಮ, ಚಿರಂಜೀವಿ, ಮತ್ತಿತರರು ಭಾಗವಹಿಸಿದ್ದರು. ತಾಲ್ಲೂಕು ಆಡಳಿತದಿಂದ ನಡೆದ ಸಂತ ಕವಿ ಸರ್ವಜ್ಞ ಅವರ  ಜಯಂತ್ಯೋತ್ಸವ ಸಮಾರಂಭದಲ್ಲಿ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ, ರಾಜಸ್ವ  ನಿರೀಕ್ಷಕ ಕುಬೇರ್ ನಾಯಕ್, ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಕುಂಬಾರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

error: Content is protected !!