ಪ್ರಜಾಪ್ರಭುತ್ವದ ಯಶಸ್ವಿಗೆ ನೀವೇ ಭಾಜ್ಯರು: ಸಿದ್ದರಾಮ ಕಲ್ಮಠ

ಪ್ರಜಾಪ್ರಭುತ್ವದ ಯಶಸ್ವಿಗೆ  ನೀವೇ ಭಾಜ್ಯರು: ಸಿದ್ದರಾಮ ಕಲ್ಮಠ

ಕೊಟ್ಟೂರು, ಫೆ. 14 – ಕೊಟ್ಟೂರೇಶ್ವರ ಮಹಾವಿದ್ಯಾಲಯ ಕೊಟ್ಟೂರು ಹಾಗೂ ತಾಲ್ಲೂಕು ಆಡಳಿತ ಕಚೇರಿ ಜಿಲ್ಲಾ ಪಂಚಾಯಿತಿ ಜಿಲ್ಲಾ ಸ್ವೀಪ್ ಸಮಿತಿ ರಾಜ್ಯಶಾಸ್ತ್ರ ವಿಭಾಗ ಹಾಗೂ ಎನ್.ಎಸ್.ಎಸ್ ಹಾಗೂ ಎನ್.ಸಿ.ಸಿ ಐಕ್ಯೂಎಸಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯನ್ನು ಕೊಟ್ಟೂರೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.   

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಾಗೂ ಪ್ರತಿಜ್ಞಾ ವಿಧಿಯನ್ನು ಬೋಧಿಸಿದ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿದ್ದರಾಮ ಕಲ್ಮಠ  ಮಾತನಾಡಿ, ಮುಂದಿನ ಮತದಾರರು ನೀವು. ಹಾಗಾಗಿ ಪ್ರಜಾಪ್ರಭುತ್ವದ ಯಶಸ್ವಿಗೆ ನೀವೇ ಭಾಜನರಾಗುತ್ತೀರಿ ಎಂದು ಹೇಳಿದರು. 

ಪ್ರಾಂಶುಪಾಲ ಪ್ರೊ. ಶಾಂತಮೂರ್ತಿ ಕುಲಕರ್ಣಿ ಮಾತನಾಡಿ, ಮತದಾರರು ಮತದಾನವನ್ನು ಮಾಡುವುದು ಅಗತ್ಯ ಮತ್ತು ಮಹತ್ವವನ್ನು ಇಂದಿನ ಆಧುನಿಕ ಯುಗಕ್ಕೆ ಅನಿವಾರ್ಯ ಎಂದರು.

ವಿಶೇಷ ಉಪನ್ಯಾಸ ನೀಡಿದ ಕಾಲೇಜಿನ ಉಪನ್ಯಾಸಕ ಎಂ. ರವಿಕುಮಾರ್ ಮಾತನಾಡಿ, ಪ್ರಜಾಪ್ರಭುತ್ವ ಪ್ರಜೆಗಳಿಂದ ಪ್ರಜಾಪ್ರಭುತ್ವದ ಮಾದರಿಯನ್ನು ಯಶಸ್ವಿಗೊಳಿಸಲು ರಾಷ್ಟ್ರೀಯ ಮತದಾರರ ದಿನಾಚರಣೆ ಅರ್ಥಪೂರ್ಣ ಎಂದು ಹೇಳಿದರು.

ಪಟ್ಟಣ ಪಂಚಾಯ್ತಿ ಮುಖ್ಯ ಅಧಿಕಾರಿ ನಸರುಲ್ಲಾ ಉಪಸ್ಥಿತರಿದ್ದರು. ಉಪನ್ಯಾಸಕ ಅರವಿಂದ್ ಬಸಾಪುರ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ರಾಜ್ಯಶಾಸ್ತ್ರ ವಿಭಾಗ ಪ್ರೊ. ರಾಧಾಸ್ವಾಮಿ ಸ್ವಾಗತಿಸಿದರು. ಶಶಿಕುಮಾರ್ ವಂದಿಸಿದರು.

error: Content is protected !!