ಉಜ್ಜಯಿನಿಯಲ್ಲಿ ನಾಳೆ ಲಕ್ಷ ದೀಪೋತ್ಸವ, ಪುಣ್ಯಸ್ಮರಣೋತ್ಸವ
ಉಜ್ಜಯಿನಿ : ಶ್ರೀ ಲಿಂ. ಜಗದ್ಗುರು ಮರುಳಸಿದ್ಧ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೋತ್ಸವದ ಅಂಗವಾಗಿ ನಾಡಿದ್ದು ದಿನಾಂಕ 25ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಶ್ರೀ ಪೀಠದಲ್ಲಿ ಸಾಮೂಹಿಕ ವಿವಾಹಗಳು ನಡೆಯಲಿದ್ದು ಅಂದು ಸಂಜೆ 6.30 ಕ್ಕೆ ಶ್ರೀ ಉಜ್ಜಯಿನಿ ಜಗದ್ಗುರು ಮರುಳಸಿದ್ಧೇಶ್ವರ ಸ್ವಾಮಿಯ ಕಾರ್ತಿಕ ಲಕ್ಷದೀಪೋತ್ಸವ ಜರುಗಲಿದೆ.