ಮಲ್ಲಾಡಿಹಳ್ಳಿ : ಯುವಜನತೆಯು ಮೊಬೈಲ್ ಗೀಳಿನಿಂದ ಹೊರಬಂದು ವಿಧಾಯಕ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಪ್ರೇರೇಪಿಸುವಂತಹ ವಸ್ತುವುಳ್ಳ ನಾಟಕಗಳು ಬರಬೇಕು ಹಾಗೂ ಯುವ ಜನತೆಯನ್ನು ಮುಟ್ಟಬೇಕು ಎಂದು ಹಿರಿಯ ಪತ್ರಕರ್ತ ಹೆಚ್.ಬಿ.ಮಂಜುನಾಥ್ ಅಭಿಪ್ರಾಯ ಪಟ್ಟರು.
ಮಲ್ಲಾಡಿಹಳ್ಳಿ : ಯೋಗ, ಆಯುರ್ವೇದ ಮತ್ತು ಶಿಕ್ಷಣಕ್ಕೆ ಪ್ರಸಿದ್ಧವಾದ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಸ್ಥಾಪಕರಾದ ವ್ಯಾಯಾಮ ಮೇಷ್ಟ್ರು, ಅಭಿನವ ಧನ್ವಂತರಿ, ತಿರುಕ ನಾಮಾಂಕಿತ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಅವರ ಜೊತೆಗೂಡಿ ಬಡವರ, ದೀನ, ದಲಿತರ ಹಾಗೂ ಹಿಂದುಳಿದ ವರ್ಗದವರ ಏಳ್ಗೆಗಾಗಿ ಉತ್ತಮ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಕಾರಣರಾದ ಶ್ರೀ ಸೂರುದಾಸ್ಜೀ ಸ್ವಾಮೀಜಿದ್ವಯರ ಪುಣ್ಯಾರಾಧನೆಯು ಆಗಸ್ಟ್ 1 ರಿಂದ 3 ರವರೆಗೆ ನಡೆಯಲಿದೆ ಎಂದು ಅನಾಥ ಸೇವಾಶ್ರಮದ ವ್ಯವಸ್ಥಾಪಕ ಡಿ.ಕೆ.ಚಂದ್ರಪ್ಪ ತಿಳಿಸಿದ್ದಾರೆ.